Skip to main content

ಈ ವಿಷಯಕ್ಕೆ ಮಕ್ಕಳಿಗೆ ಮನೆಯಲ್ಲಿ ಹೊಡೆಯುತ್ತಿದ್ದರೆ ದಯವಿಟ್ಟು ಮಕ್ಕಳಿಗೆ ಹೊಡೆಯುವುದನ್ನು ನಿಲ್ಲಿಸಿ

  ಈ ವಿಷಯಕ್ಕೆ ಮಕ್ಕಳಿಗೆ ಮನೆಯಲ್ಲಿ ಹೊಡೆಯುತ್ತಿದ್ದರೆ ದಯವಿಟ್ಟು ಮಕ್ಕಳಿಗೆ ಹೊಡೆಯುವುದನ್ನು ನಿಲ್ಲಿಸಿ



 ಬೇಸಿಗೆ ರಜೆ ಮುಗೀತು ಮಕ್ಕಳಿಗೆ ಶಾಲಾ ಪ್ರಾರಂಭವಾಗಿ ಒಂದು ತಿಂಗಳಾಯಿತು ಈಗ ಮಕ್ಕಳ ಒಂದು ಪಾಠದ ವಿಚಾರ ಶಾಲೆಯಲ್ಲಿ ಪ್ರಾರಂಭವಾಗಿರುತ್ತೆ ಇಲ್ಲಿ ನಾವು ಗಮನದಲ್ಲಿಟ್ಟುಕೊಳ್ಳುವ ವಿಷಯವೇನೆಂದರೆ ಮಕ್ಕಳಿಗೆ ಶಾಲೆಯ ವಾತಾವರಣ ಯಾವ ರೀತಿ ಅನಿಸುತ್ತಿದೆ , ಮಕ್ಕಳಿಗೆ ಶಾಲೆಗೆ ಹೋಗಲಿಕ್ಕೆ ಏನಾದರೂ ಅನಾನುಕೂಲ ಇದೆಯಾ, ಏನಾದರೂ ತೊಂದರೆ ಆಗುತ್ತಿದೆಯ? .. ಮೊದಲು ನೀವು ಮನೆಯಲ್ಲಿ ಇದನ್ನು ಪ್ರತಿಯೊಂದು ಮಕ್ಕಳ ಬಳಿ ಕೇಳಬೇಕು...

 ಎರಡನೆಯ ವಿಷಯ ಬಂದು ಪ್ರತ್ಯೇಕವಾಗಿ ಮನೆಯಲ್ಲಿರುವ ತಾಯಂದಿರು ಗಮನದಲ್ಲಿಟ್ಟುಕೊಳ್ಳಬೇಕಾದ ವಿಷಯ

 ಮಕ್ಕಳಿಗೆ ಈ ವಿಷಯದಲ್ಲಿ ಹೊಡೆಯುವುದನ್ನು ನಿಲ್ಲಿಸಿ!. 

 ಈಗಷ್ಟೇ ಹೋಗುವ " ಎಲ್ ಕೆ ಜಿ" "ಯು ಕೆ ಜಿ " ಒಂದರಿಂದ ಐದನೇ ತರಗತಿಯ ವಿಭಾಗದ ಮಕ್ಕಳು ಈ ಮಕ್ಕಳ ಮೇಲೆ ತುಂಬಾನೇ ಪ್ರೆಜರ್ ಹಾಕಲಿಕ್ಕೆ ಹೋಗಬೇಡಿ ಮೊದಲಿಗೆ ಬಂದು" ಎಲ್ ಕೆ ಜಿ" "ಯು ಕೆ ಜಿ " ಮಕ್ಕಳ ಮೇಲೆ ಪ್ರೆಶರ್ ಹಾಕಲೇಬಾರದು..

  ಕೆಲವೊಂದು ಮಕ್ಕಳಿಗೆ ಅಷ್ಟು ವೇಗವಾಗಿ ಅಕ್ಷರ ಬರೆಯಲು ಅವರಿಂದ ಸಾಧ್ಯವಾಗುವುದಿಲ್ಲ.. ಕೆಲವೊಂದು ಮಕ್ಕಳಿಗೆ ಓದಲು ಸಾಧ್ಯವಾಗುವುದಿಲ್ಲ. ಅಕ್ಷರವನ್ನು ಗುರುತು ಹಿಡಿಯಲು ಸಾಧ್ಯವಾಗುವುದಿಲ್ಲ

 ಎಲ್ಲಾ ಮಕ್ಕಳ ಮೆಮೊರಿ ಪವರ್ ಮೆದುಳಿನ ಒಂದು ಶಕ್ತಿ ಒಂದೇ ರೀತಿಯಲ್ಲಿ ಇರೋದಿಲ್ಲ..

 ನಮ್ಮ ಮಕ್ಕಳು ಓದುವುದಿಲ್ಲ ಬೇರೆ ಮಕ್ಕಳು ಓದುತ್ತಿದ್ದಾರೆ ಅವರು ಬರೆಯುತ್ತಿದ್ದಾರೆ ಅಂತ ಹೇಳಿ ಮನೆಯಲ್ಲಿ ತಾಯಂದಿರು ಮಕ್ಕಳನ್ನು ಹೊಡೆಯುತೀರಾ.

ದಯವಿಟ್ಟು ಈ ಒಂದು ತಪ್ಪು ಮಾಡಲಿಕ್ಕೆ ಹೋಗಬೇಡಿ ಹಾಗೆ ನಿಮ್ಮ ಮಕ್ಕಳನ್ನು ಬೇರೆಯವರಿಗೆ ಹೋಲಿಕೆ ಮಾಡಲು ಹೋಗಲೇಬಾರದು..

 ಸರ್ಕಾರವೇ ಮಕ್ಕಳಲ್ಲಿ ಸಮಾನತೆ ಕಾಣಬೇಕು ಅಂತ ಹೇಳಿ ವಾರಪೂರ್ತಿ ಸಮವಸ್ತ್ರ ಧರಿಸಲು ಆದೇಶವನ್ನು ನೀಡಿದೆ ಆದರೆ ನಾವು ತಾಯಂದಿರು ಮನೆಯಲ್ಲಿ ಬೇರೆ ಮಕ್ಕಳಿಗೆ ಹೋಲಿಕೆ ಮಾಡುತ್ತಾ ಅವರ ಒಂದು ಸಮಾನತೆಯನ್ನು ಕಿತ್ತುಕೊಳ್ಳುವ ರೀತಿ ನಡೆದುಕೊಳ್ಳಬಾರದು...

 ಈಗಷ್ಟೇ ಆ ಮಕ್ಕಳು ಶಾಲೆ ಅಂದ್ರೆ ಏನು ಅಂತ ಅರ್ಥ ಮಾಡಿಕೊಳ್ಳುತ್ತಿದೆ.. ತಾಯಂದಿರು ಮಕ್ಕಳಿಗೆ ಮನೆಯಲ್ಲಿ ಶಾಲೆಯ ಮನೆ ಕೆಲಸ ಮಾಡಿಸುವಾಗ ದುಡುಕಬೇಡಿ ಅವರೊಟ್ಟಿಗೆ ಸಿಟ್ಟಾಗಿ ಮಾತನಾಡಬೇಡಿ ತುಂಬಾನೇ ಸೂಕ್ಷ್ಮವಾಗಿ ಅವರಿಗೆ ತಿಳಿಯುವ ಹಾಗೆ ಹೇಳಿಕೊಡಿ ಯಾಕಂದ್ರೆ ಮಕ್ಕಳಿಗೆ ನೀವು ಬೈದಷ್ಟು ನೀವು ಕೋಪಗೊಂಡಷ್ಟು ಅವರಲ್ಲಿ ಶಾಲೆಯ ಬಗ್ಗೆ ನಕಾರಾತ್ಮಕ ಯೋಚನೆಗಳು ಬೆಳೆದು ಶಾಲೆಯ ಮೇಲೆ ಇದ್ದ ಪ್ರೀತಿ ಮಕ್ಕಳಿಂದ ದೂರ ಹೋಗುತ್ತೆ..


ಸಂಪಾದಕಿ

 Yasmeenriyaz 




Comments

Popular posts from this blog

ಮಾಂಸದಿಂದ ತುಂಬಿದ ಈ ದೇಹ ಶಾಶ್ವತವಲ್ಲ

 ಮಾಂಸದಿಂದ ತುಂಬಿದ ಈ ದೇಹ ಶಾಶ್ವತವಲ್ಲ ಹುಚ್ಚು ಮಾನವ ಮಾಂಸ ಖಂಡಗಳಿಂದ ತುಂಬಿದ ದೇಹವನ್ನು ಅಪಾರವಾಗಿ ಪ್ರೀತಿಸುತ್ತಾನೆ ಅದರಲ್ಲೂ ತಾರತಮ್ಯವನ್ನು ಮಾಡುತ್ತಾ ಒಬ್ಬರಿಗೊಬ್ಬರು ಕೀಳರಿಮೆಯಿಂದ ನಡೆಯುತ್ತಿದ್ದಾರೆ  ನಾವು ಮರಣ ಹೊಂದಿದ ಮೇಲೆ ನಮ್ಮ ದೇಹವನ್ನು ಕುಕ್ಕಿ ತಿನ್ನಲು ಆವೆಷ್ಟೋ ಜೀವಿಗಳು ಕಾಯುತ್ತಿದ್ದವೆ.. ಯಾವ ದೇಹದ ಅಂದ ಚಂದವು ಶಾಶ್ವತವಲ್ಲ ಎಲ್ಲಾ ದೇಹಕ್ಕೂ ಮುಪ್ಪು ಬರಲಿದೆ ಸಾವು ಖಚಿತವಾಗಿದೆ.. ಇಂದು ನಿನ್ನ ದೇಹವು ಬಲಿಷ್ಠವಾಗಿರಬಹುದು, ಸುಂದರವಾಗಿರಬಹುದು, ಆರೋಗ್ಯವಾಗಿರಬಹುದು. ಆದರೆ ಈ ದೇಹವು ಶಾಶ್ವತವಲ್ಲ. ಒಂದು ದಿನ ಅದು ವೃದ್ಧವಾಗುತ್ತದೆ, ದುರ್ಬಲವಾಗುತ್ತದೆ ಮತ್ತು ಅಂತಿಮವಾಗಿ ಮಣ್ಣಿನಲ್ಲಿ ಲೀನವಾಗುತ್ತದೆ. ಅಲ್ಲಾಹನು ಪ್ರತಿಯೊಬ್ಬ ಮನುಷ್ಯನಿಗೂ ಮರಣವನ್ನು ನಿಶ್ಚಯಿಸಿದ್ದಾನೆ. ಮರಣದಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಈ ಲೋಕದ ಸೌಂದರ್ಯ, ಸಂಪತ್ತು, ಅಧಿಕಾರ ಮತ್ತು ದೇಹದ ಬಲದ ಬಗ್ಗೆ ಅಹಂಕಾರ ಪಡುವುದು ಮೂರ್ಖತನ.. ಯೌವ್ವನವು ಅಲ್ಲಾಹನು ನೀಡಿದ ಅತ್ಯುತ್ತಮವಾದ ಕಾಲವಾಗಿದೆ.. ಆ ಸಮಯದಲ್ಲಿ  ಪರಪುರುಷ ಅಥವಾ ಪರ ಸ್ತ್ರೀಯರ ಮೇಲೆ ಆಸೆ ಪಡುವುದು ಅಕ್ಷರಸ ತಪ್ಪಾಗಿದೆ . ನಿಮ್ಮನ್ನು ಅಲ್ಲಾಹನಿಂದ ದೂರ ಮಾಡುವ ದೊಡ್ಡ ಕಾರಣಗಳಲ್ಲಿ ಕಾಮ (ಶಹ್ವತ್) ಮತ್ತು ಕ್ರೋಧ (ಘದಬ್) ಪ್ರಮುಖವಾಗಿವೆ. ಇವುಗಳನ್ನು ನಿಯಂತ್ರಿಸದಿದ್ದರೆ ಮನುಷ್ಯನು ಅನೇಕ ಪಾಪಗಳಲ್ಲಿ ಬೀಳುತ್ತಾನೆ. ಕಾಮ...

ಗಂಡ-ಹೆಂಡತಿಯ ಬಾಂಧವ್ಯ ಹೇಗಿರಬೇಕು? | ಸುಖೀ ದಾಂಪತ್ಯ ಜೀವನಕ್ಕೆ ಅಮೂಲ್ಯ ಸಲಹೆಗಳು

 ಗಂಡ-ಹೆಂಡತಿಯ ಬಾಂಧವ್ಯ.   ಹೇಗಿರಬೇಕು? | ಸುಖೀ ದಾಂಪತ್ಯ.    ಜೀವನಕ್ಕೆ ಅಮೂಲ್ಯ ಸಲಹೆಗಳು ಗಂಡ ಹೆಂಡತಿ ಜಗಳ ನಮ್ಮ ಹಿರಿಯರು ಹೇಳಿದ ಹಾಗೆ. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಆದರೆ ಈಗ ಗಂಡ ಹೆಂಡತಿ ಜಗಳ ವಿಚ್ಛೇದನ ಸಿಗುವ ತನಕ  ಆಗಿನ ಕಾಲಕ್ಕೂ ಈಗಿನ ಕಾಲಕ್ಕೂ ಒಂದು ಸಣ್ಣ ಗಾದೆ ಮಾತು ಎಷ್ಟೊಂದು ಬದಲಾವಣೆಯನ್ನು ಸೂಚಿಸುತ್ತದೆ   ಇಸ್ಲಾಂ ಧಾರ್ಮಿಕದಲ್ಲಿ  ಉಲ್ಲೇಖವಾದ ಒಂದು ಮಾತಿದೆ  ಗಂಡ ಹೆಂಡತಿ ಒಬ್ಬರಿಗೊಬ್ಬರು ಮಾತನಾಡುವಾಗ ಅವರ ಕಣ್ಣಿನಲ್ಲಿ  ಅವರ ಪ್ರತಿಬಿಂಬ ಕಾಣಬೇಕು ಅಂದರೆ ಒಬ್ಬರಿಗೊಬ್ಬರು ಮಾತನಾಡುವಾಗ    ಮುಖಮುಖಿಯಾಗಿ ಮಾತನಾಡಬೇಕು.   ಇದರಿಂದ ಪ್ರೀತಿ ಹೆಚ್ಚಾಗುತ್ತೆ ಸಂಬಂಧ ಇನ್ನು ಕೂಡ ಗಟ್ಟಿಯಾಗುತ್ತೆ ಆದರೆ ಈಗ  ಮುಖ ನೋಡುವುದು ಬಿಡಿ  ಮಾತನಾಡಲು ಕೂಡ ಸಮಯ ಇರುವುದಿಲ್ಲ   ಯಾಕಂದರೆ ಈಗ ಎಲ್ಲವೂ ಆಧುನಿಕವಾಗಿದೆ ಒಂದೇ ಮನೆಯಲ್ಲಿ ಇದ್ದುಕೊಂಡು ಹೆಂಡತಿಯೊಂದಿಗೆ ಮಾತನಾಡಬೇಕೆಂದರೆ ಮೆಸೇಜ್ ಮುಖಾಂತರ ಸಂದೇಶವನ್ನು ನೀಡುವುದು 🫥  ಎಲ್ಲವೂ ಈಗ ಫೋನ್ ಮುಖಾಂತರ ನಡೆಯುತ್ತಿದೆ..  ನಾನು ಮೊದಲಿಗೆ ಹೇಳಿದ ಹಾಗೆ  ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಇದನ್ನು ಹಿರಿಯರು ಪಾಲಿಸುತ್ತಿದ್ದರು ಹಾಗೆ ಅದೇ ರೀತಿ ಕೂಡ ನಡೆಯುತ್ತಿದ್ದರು ಯಾಕೆಂದರೆ ಅಂದಿನ ಕಾಲದಲ್ಲಿ   ಗಂಡ ಹೆಂಡತಿಯೊ...

ಒಂದು ದಿನ ಎಲ್ಲವನ್ನೂ ಬಿಟ್ಟು ಹೋಗಲೇಬೇಕು

ಮಾನವನು ಎಷ್ಟೇ ದೊಡ್ಡವನಾಗಿದ್ದರೂ,  ಎಷ್ಟೇ ಸಂಪತ್ತನ್ನು ಗಳಿಸಿದ್ದರೂ, ಎಷ್ಟೇ ಅಧಿಕಾರವನ್ನು ಹೊಂದಿದ್ದರೂ ಒಂದು ದಿನ ಈ ಲೋಕವನ್ನು ಬಿಟ್ಟು ಹೋಗಲೇಬೇಕು. ಇದೇ ಜೀವನದ ಅಚಲ ಸತ್ಯ. ನಾವು ಈ ಭೂಮಿಗೆ ಖಾಲಿ ಕೈಯಲ್ಲಿ ಬರುತ್ತೇವೆ, ಖಾಲಿ ಕೈಯಲ್ಲೇ ಹೋಗುತ್ತೇವೆ. ನಮ್ಮೊಂದಿಗೆ ನಮ್ಮ ಒಳ್ಳೆಯ ಕಾರ್ಯಗಳು , ಮಾಡಿದ ಸತ್ಕರ್ಮಗಳು ಬೇರೆಯವರಿಗೆ ನೀಡಿದ ದಾನ ಧರ್ಮ , ಮಾಡಿದ ಉಪವಾಸ,  ಹೊರತು ಹಣ,  ಹೆಸರು ಐಷಾರಾಮಿ ಮನೆ ದುಬಾರಿ ಕಾರು ನಿನ್ನ ಸಂಪತ್ತು , ಕೊನೆಗೆ  ನೀನು ಹಾಕಿಕೊಂಡ ಉಡುಪು ಕೂಡ ನಿನ್ನೊಂದಿಗೆ ಬರುವುದಿಲ್ಲ..ಇಷ್ಟು  ತಿಳಿದಿದ್ದರೆ ಇಂದು ಯಾರೂ ಕೂಡ " ಮರಣ" ವನ್ನು ದ್ವೇಷಿಸುತ್ತಿರಲಿಲ್ಲ.. ಇಂದಿನ ಜಗತ್ತಿನಲ್ಲಿ ಪ್ರತಿಯೊಬ್ಬರೂ ಹಣ, ಆಸ್ತಿ, ಅಧಿಕಾರ, ಹೆಸರಿನ ಹಿಂದೆ ಓಡುತ್ತಿದ್ದಾರೆ. ಉತ್ತಮ ಜೀವನವನ್ನು ಕಟ್ಟಿಕೊಳ್ಳುವುದು ತಪ್ಪಲ್ಲ. ಆದರೆ ಈ ಎಲ್ಲದರ ಮಧ್ಯೆ ಈ ಲೋಕ ಶಾಶ್ವತವಲ್ಲ ಎಂಬ ದೊಡ್ಡ ಸತ್ಯವನ್ನು ನಾವು ಕೆಲವೊಮ್ಮೆ ಮರೆತುಬಿಡುತ್ತೇವೆ  . ಆದರೆ ಜೀವನದ ಕೊನೆಯ ಕ್ಷಣದಲ್ಲಿ ಅವನಿಗೆ ಅರಿವಾಗುವುದು ಒಂದೇ ವಿಷಯ—ಇಷ್ಟು ವರ್ಷಗಳ ಓಟದ ಅಂತ್ಯ ಇಷ್ಟೇ ಎಂದು. ನಾವು ಪ್ರತಿ ದಿನ   ನೋಡುತ್ತೇವೆ. ಹೂವು ಅರಳುತ್ತದೆ, ಕೆಲವೇ ದಿನಗಳಲ್ಲಿ ಒಣಗುತ್ತದೆ. ದೊಡ್ಡ ದೊಡ್ಡ ಮರಗಳೂ ಒಂದು ದಿನ ನೆಲಕ್ಕುರುಳುತ್ತವೆ. ಕೆಲವೊಮ್ಮೆ ಪ್ರಕೃತಿಯ ವಿಕೋಪಕ್ಕೆ ಇಡೀ ಊರಿಗೆ ಊರೇ ನಾಶವಾಗುತ್ತದೆ...